ಈರುಳ್ಳಿಗೆ ಬೆಂಬಲ ಬೆಲೆ ಘೋಷಿಸಿ
ಮಾನ್ಯರೆ,
ಏಕಾಏಕಿ ನೆರೆಯ ರಾಜ್ಯ ಮಹಾರಾಷ್ಟ್ರದ ಈರುಳ್ಳಿ ನಮ್ಮ ರಾಜ್ಯಕ್ಕೆ ಬಂದಿರುವುದು ಹಾಗೂ ರಾಜ್ಯದ ಈರುಳ್ಳಿಗೆ ರಪ್ತು ಮಾಡುವುದಕ್ಕೆ ನಿರ್ಬಂಧ ಹೇರಿರುವುದರಿಂದ 20 ವರ್ಷದ ಬಳಿಕ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈರುಳ್ಳಿ ಬೆಲೆ ದಾಖಲೆ ಮಟ್ಟದಲ್ಲಿ ಪಾತಾಳಕ್ಕೆ ಕುಸಿದಿದೆ. ಇದರಿಂದಾಗಿ ಈರುಳ್ಳಿ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮಾರುಕಟ್ಟೆಯಲ್ಲಿ ಕೆ.ಜಿ. ಈರುಳ್ಳಿಗೆ 5ರಿಂದ 6ರೂಪಾಯಿಗೆ ಬೇಡಿಕೆ ಇದ್ದು, ಒಂದು ಈರುಳ್ಳಿ ಮೂಟೆಗೆ 250ರಿಂದ 600 ರೂ. ವರೆಗೂ ಕುಸಿದಿದೆ. ಚಿತ್ರದುರ್ಗ, ಜಗಳೂರು, ಚಳ್ಳಕೆರೆ ಹಾಗೂ ರಾಜ್ಯದ ಇತರ ಭಾಗದಿಂದ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆದ ರೈತರು ಬೆಲೆ ಕುಸಿದಿರುವುದರಿಂದ ಮಾಡಿದ ಸಾಲ ತೀರಿಸಲಾಗದೆ ರಸ್ತೆಯಲ್ಲಿ ಕುಳಿತು ಕಣ್ಣೀರು ಹಾಕುತ್ತಿದ್ದಾರೆ.
ಆದ್ದರಿಂದ ಸರಕಾರ ಈರುಳ್ಳಿಗೆ ಸೂಕ್ತ ಬೆಂಬಲ ಬೆಲೆ ಘೋಷಿಸಿ ಕಷ್ಟದಲ್ಲಿರುವ ರೈತರನ್ನು ರಕ್ಷಣೆ ಮಾಡಬೇಕಿದೆ.
Next Story