ಮೆಟ್ರೋದಲ್ಲಿನ ಜನದಟ್ಟಣೆ ನಿಯಂತ್ರಿಸಿ
ಮಾನ್ಯರೆ,
ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು ಬೆಂಗಳೂರಿನಲ್ಲಿ ಆರಂಭಿಸಲಾಗಿರುವ 'ನಮ್ಮ ಮೆಟ್ರೋ'ದಲ್ಲಿ ದಿನದಿಂದ ದಿನಕ್ಕೆ ಜನದಟ್ಟಣೆ ಹೆಚ್ಚಾಗುತ್ತಿದೆ. ಎಲ್ಲಾ ಬೋಗಿಗಳು ತುಂಬಿ ತುಳುಕುತ್ತಿವೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ. ಉತ್ತರ-ದಕ್ಷಿಣ ಕಾರಿಡಾರ್ನಲ್ಲೂ ನಾಗಸಂದ್ರದಿಂದ ಯೆಲಚೇನಹಳ್ಳಿವರೆಗೂ ರೈಲು ಸಂಚಾರ ಆರಂಭವಾದರೆ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ. ಅಂಕಿ- ಅಂಶಗಳ ಪ್ರಕಾರ ಮೆಟ್ರೋದಲ್ಲಿ ಪ್ರತೀ ದಿನ ಎರಡು ಲಕ್ಷ ಮಂದಿ ಪ್ರಯಾಣಿಸುತ್ತಾರೆ. ಹೀಗಾಗಿಯೇ ಜನದಟ್ಟಣೆ ಹೆಚ್ಚಾಗುತ್ತಿದೆ. ಆದರೆ ಈ ದಟ್ಟಣೆಯನ್ನು ನಿಯಂತ್ರಿಸಲು ಯಾವುದೇ ವ್ಯವಸ್ಥೆ ಮಾಡಲಾಗಿಲ್ಲ. ಹೀಗಾಗಿ ಹಗಲು ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಆದ್ದರಿಂದ ಕೂಡಲೇ ಮೆಟ್ರೋದಲ್ಲಿ ಜನದಟ್ಟಣೆ ನಿಯಂತ್ರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕಾಗಿದೆ.
Next Story