ಶ್ರೀಲಂಕಾ: ತುರ್ತು ಪರಿಸ್ಥಿತಿ ಮುಕ್ತಾಯ
ಕೊಲಂಬೋ, ಮಾ.18: ಮುಸ್ಲಿಮ್ ವಿರೋಧಿ ಗಲಭೆ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ 12 ದಿನಗಳ ಹಿಂದೆ ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನು ರವಿವಾರ ಹಿಂದೆಗೆದುಕೊಳ್ಳಲಾಗಿದೆ. ಈ ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದು, 100ಕ್ಕೂ ಅಧಿಕ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.
ಭದ್ರತಾ ಪರಿಸ್ಥಿತಿಯಲ್ಲಿನ ಸುಧಾರಣೆಗಳಿಂದಾಗಿ ತುರ್ತು ಪರಿಸ್ಥಿತಿಯನ್ನು ಕೊನೆಗೊಳಿಸಲಾಗುವುದು ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ತಿಳಿಸಿದ್ದಾರೆ.
ಕ್ಯಾಂಡಿಯಲ್ಲಿ ಹೆಚ್ಚಿನ ಮುಸ್ಲಿಮ್ ವಿರೋಧಿ ಗಲಭೆಗಳು ನಡೆದಿರುವುದಾಗಿ ವರದಿಯಾಗಿದೆ. ಗಲಭೆಗೆ ಸಂಬಂಧಿಸಿ 300 ಮಂದಿಯನ್ನು ಬಂಧಿಸಲಾಗಿದೆ.
Next Story