ಹಫೀಝ್ಗೆ ‘ಕಿರುಕುಳ’ ಕೊಡಬೇಡಿ: ಪಾಕ್ ಸರಕಾರಕ್ಕೆ ನ್ಯಾಯಾಲಯ ಆದೇಶ
ಇಸ್ಲಾಮಾಬಾದ್, ಎ. 5: ಭಯೋತ್ಪಾದಕ ಸಂಘಟನೆ ಲಷ್ಕರೆ ತಯ್ಯಿಬ ಸ್ಥಾಪಕ ಹಫೀಝ್ ಸಯೀದ್ನಿಗೆ ‘ಕಿರುಕುಳ ಕೊಡಬಾರದು’ ಹಾಗೂ ತನ್ನ ‘ಸಮಾಜ ಕಲ್ಯಾಣ ಚಟುವಟಿಕೆ’ಗಳನ್ನು ಮುಂದುವರಿಸಲು ಅವನಿಗೆ ಅವಕಾಶ ನೀಡಬೇಕು ಎಂಬುದಾಗಿ ಪಾಕಿಸ್ತಾನದ ನ್ಯಾಯಾಲಯವೊಂದು ಗುರುವಾರ ಸರಕಾರಕ್ಕೆ ಆದೇಶ ನೀಡಿದೆ.
ತನ್ನ ಸಮಾಜ ಕಲ್ಯಾಣ ಚಟುವಟಿಕೆಗಳಲ್ಲಿ ಅಧಿಕಾರಿಗಳು ಹಸ್ತಕ್ಷೇಪ ನಡೆಸುವುದನ್ನು ನಿಲ್ಲಿಸುವಂತೆ ಅವರಿಗೆ ಸೂಚನೆ ನೀಡಬೇಕು ಎಂದು ಕೋರಿ ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯವರೆಗೆ ತನ್ನ ಸೂಚನೆಗಳನ್ನು ಪಾಲಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ.
Next Story