Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 62ಶ್ರೀಮಂತರ ಸಂಪತ್ತು ಅರ್ಧ ಜನಸಂಖ್ಯೆಗೆ...

62ಶ್ರೀಮಂತರ ಸಂಪತ್ತು ಅರ್ಧ ಜನಸಂಖ್ಯೆಗೆ ಸಮ

ವಾರ್ತಾಭಾರತಿವಾರ್ತಾಭಾರತಿ18 Jan 2016 11:35 PM IST
share
62ಶ್ರೀಮಂತರ ಸಂಪತ್ತು ಅರ್ಧ ಜನಸಂಖ್ಯೆಗೆ ಸಮ

ಜಗತ್ತಿನಲ್ಲಿ ಏರುತ್ತಿರುವ ವರಮಾನ ಅಸಮಾನತೆ: ಸಮೀಕ್ಷೆ ಕಳವಳ


ಡಾವೋಸ್, ಜ. 18: ಜಗತ್ತಿನ 62 ಮಂದಿ ಅತ್ಯಂತ ಶ್ರೀಮಂತರು ಹೊಂದಿರುವ ಸಂಪತ್ತು ಜಗತ್ತಿನ ಜನಸಂಖ್ಯೆಯ ಕೆಳಾರ್ಧದಲ್ಲಿರುವ ಬಡವರು ಹೊಂದಿರುವ ಸಂಪತ್ತಿಗೆ ಸಮವಾಗಿದೆ ಎಂದು ನೂತನ ಸಮೀಕ್ಷೆಯೊಂದು ಸೋಮವಾರ ಹೇಳಿದೆ.
ಇದು ಭಾರತ ಮತ್ತು ಇತರ ದೇಶಗಳಲ್ಲಿರುವ ಆದಾಯ ಅಸಮಾನತೆಯ ಭೀಕರತೆಯನ್ನು ಎತ್ತಿ ತೋರಿಸಿದೆ.

ಅದೂ ಅಲ್ಲದೆ, ಈ 62 ಅತ್ಯಂತ ಶ್ರೀಮಂತರ ಪೈಕಿ ಒಂಬತ್ತು ಮಂದಿ ಮಾತ್ರ ಮಹಿಳೆಯರು. 2010ರ ಬಳಿಕ ಈ 62 ಮಂದಿಯ ಒಟ್ಟು ಸಂಪತ್ತು 50 ಸಾವಿರ ಕೋಟಿ ಡಾಲರ್‌ನಷ್ಟು ಹೆಚ್ಚಾಗಿದ್ದು, 1.76 ಲಕ್ಷ ಕೋಟಿ ಡಾಲರ್‌ಗೆ ಏರಿದೆ.
ಅದೇ ವೇಳೆ, 2010ರ ಬಳಿಕ ಜಗತ್ತಿನ ಜನಸಂಖ್ಯೆಯ ಕೆಳಾರ್ಧದಲ್ಲಿರುವ ಬಡವರ ಸಂಪತ್ತು 1 ಲಕ್ಷ ಕೋಟಿ ಡಾಲರ್‌ನಷ್ಟು ಕುಸಿದಿದೆ. ಅಂದರೆ, ಅವರ ಒಟ್ಟು ಸಂಪತ್ತಿನಲ್ಲಿ 41 ಶೇಕಡ ಕುಸಿತವಾಗಿದೆ.
ಇದೇ ಅವಧಿಯಲ್ಲಿ ಜಾಗತಿಕ ಜನಸಂಖ್ಯೆ ಸುಮಾರು 40 ಕೋಟಿಯಷ್ಟು ಹೆಚ್ಚಾಗಿರುವ ಹೊರತಾಗಿಯೂ ಈ ಆದಾಯ ಕುಸಿತ ಸಂಭವಿಸಿದೆ ಎಂದು ಮಾನವಹಕ್ಕುಗಳ ಸಂಸ್ಥೆ ‘ಆಕ್ಸ್‌ಫಾಮ್’ ನಡೆಸಿರುವ ‘ಒಂದು ಶೇಕಡ ಮಂದಿಗಾಗಿ ಇರುವ ಆರ್ಥಿಕತೆ’ ಎಂಬ ಹೆಸರಿನ ಅಧ್ಯಯನ ತಿಳಿಸಿದೆ.
ವಿಶ್ವ ಆರ್ಥಿಕ ವೇದಿಕೆಯ ಐದು ದಿನಗಳ ವಾರ್ಷಿಕ ಸಮಾವೇಶಕ್ಕೆ ಪೂರ್ವಭಾವಿಯಾಗಿ ಸಮೀಕ್ಷೆಯನ್ನು ಬಿಡುಗಡೆ ಮಾಡಲಾಗಿದೆ. ಸಮಾವೇಶವು ನಾಳೆ ಇಲ್ಲಿ ಆರಂಭಗೊಳ್ಳಲಿದೆ.
ಜಗತ್ತಿನ ಜನಸಂಖ್ಯೆಯ ಕೆಳಾರ್ಧದ ಬಡವರ ಸಂಪತ್ತಿಗೆ ಸಮಾನವಾದ ಸಂಪತ್ತನ್ನು 2010ರಲ್ಲಿ 388 ಮಂದಿ ಹೊಂದಿದ್ದರು ಎಂದು ಅಧ್ಯಯನ ತಿಳಿಸಿದೆ.
ಆ ಬಳಿಕ, ಅದು ನಿರಂತರವಾಗಿ ಕುಸಿದಿದ್ದು 2011ರಲ್ಲಿ 177, 2012ರಲ್ಲಿ 159, 2013ರಲ್ಲಿ 92 ಮತ್ತು 2014ರಲ್ಲಿ 80ಕ್ಕೆ ಇಳಿದಿತ್ತು.
 ವಿವಿಧ ದೇಶಗಳಲ್ಲಿರುವ ಆದಾಯ ಅಸಮಾನತೆ ಬಗ್ಗೆ ಪ್ರಸ್ತಾಪಿಸಿರುವ ಅಧ್ಯಯನ, ಭಾರತದ ಅಗ್ರ ಐಟಿ ಕಂಪೆನಿಯೊಂದರ ಸಿಇಒ ಅಲ್ಲಿನ ಸಾಮಾನ್ಯ ಉದ್ಯೋಗಿಗಿಂತ 416 ಪಟ್ಟು ಹೆಚ್ಚು ವೇತನ ಪಡೆಯುತ್ತಾರೆ ಎಂದಿದೆ. ಅದೇ ವೇಳೆ, ಅತ್ಯಂತ ದೊಡ್ಡ ಸಿಗರೆಟ್ ತಯಾರಕ ಕಂಪೆನಿಯ ಸಿಇಒ ಅದೇ ಕಂಪೆನಿಯ ಇತರ ಸಿಬ್ಬಂದಿಯ ಸರಾಸರಿ ವೇತನದ 439 ಪಟ್ಟು ಹೆಚ್ಚು ವೇತನ ಪಡೆಯುತ್ತಾರೆ ಎಂದಿದೆ.
ಭಾರತದ 46 ಶೇಕಡ ಬಿಲಿಯಾಧಿಪತಿಗಳು ತಮ್ಮ ಸಂಪತ್ತನ್ನು ಮಾರುಕಟ್ಟೆ ಶಕ್ತಿ, ಅಥವಾ ಪ್ರಭಾವವನ್ನು ಅವಲಂಬಿಸಿರುವ ಕ್ಷೇತ್ರದಿಂದ ಪಡೆದುಕೊಂಡಿದ್ದಾರೆ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X