ರಾಜ್ಯ ರಾಜಕೀಯಕ್ಕೆ ಮರಳುವ ನಿರ್ಧಾರ ಮಾಡಿಲ್ಲ: ಸಂಸದ ಆರ್.ಧ್ರುವನಾರಾಯಣ
ಬೆಂಗಳೂರು, ಅ. 22: ಮುಂಬರುಸಭಾ ಚುನಾವಣೆಯಲ್ಲಿ ನಾನು ರಾಜ್ಯಕ್ಕೆ ಮರಳಿ ಬರುವ ಯಾವುದೇ ನಿರ್ಧಾರ ಮಾಡಿಲ್ಲ. ಆ ಚಿಂತನೆಯನ್ನು ಮಾಡಿಲ್ಲ. ಈ ಬಗ್ಗೆ ಮಾಧ್ಯಮಗಳ ಸುದ್ದಿ ಆಧಾರ ರಹಿತ ಹಾಗೂ ಸತ್ಯಕ್ಕೆ ದೂರ ಎಂದು ಧ್ರುವನಾರಾಯಣ ಸ್ಪಷ್ಟನೆ ನೀಡಿದ್ದಾರೆ.
ಚಾಮರಾಜನಗರ ಲೋಸಭಾ ಕ್ಷೇತ್ರದ ಅಭಿವೃದ್ಧಿ ಮತ್ತು ತಾನು ರಾಜ್ಯದ ಪರವಾಗಿ ಲೋಕಸಭೆಯಲ್ಲಿ ಧ್ವನಿ ಎತ್ತುವುದನ್ನು ಸಹಿಸದ ಕೆಲವರು ನನ್ನ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆಂದು ಸಂಸದ ಆರ್.ಧ್ರುವನಾರಾಯಣ ಆರೋಪಿಸಿದ್ದಾರೆ.
ನಾನು ಈಗಾಗಲೇ ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಮತ್ತೆ ಶಾಸಕನಾಗಬೇಕೆಂದು ಎಲ್ಲಿಯೂ ಹೇಳಿಲ್ಲ. ಆ ಇಂಗಿತವನ್ನೂ ವ್ಯಕ್ತಪಡಿಸಿಲ್ಲ. ಆದರೂ, ಕೆಲವರು ಅನಗತ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದನ್ನು ಯಾರೂ ನಂಬಬಾರದು ಎಂದು ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.
Next Story