ರವಿ ಬೆಳಗೆರೆಗೆ ಮಧ್ಯಂತರ ಜಾಮೀನು
ಬೆಂಗಳೂರು, ಡಿ.13: ಸಹೋದ್ಯೋಗಿ ಪತ್ರಕರ್ತನ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ 'ಹಾಯ್ ಬೆಂಗಳೂರು' ಸಂಪಾದಕ ರವಿ ಬೆಳಗೆರೆಯವರಿಗೆ ಬೆಂಗಳೂರು ಸಿವಿಲ್ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ಇಬ್ಬರು ಶ್ಯೂರಿಟಿ ಹಾಗು 1 ಲಕ್ಷ ರೂ. ಬಾಂಡ್ ನೀಡುವಂತೆ ಸೂಚಿಸಿ, ಡಿಸೆಂಬರ್ 16ರವರೆಗೆ ಜಾಮೀನು ನೀಡಲಾಗಿದೆ. ತನಿಖೆಗೆ ಸಹಕರಿಸುವಂತೆಯೂ ಕೋರ್ಟ್ ರವಿ ಬೆಳಗೆರೆಯವರಿಗೆ ಸೂಚನೆ ನೀಡಿದೆ.
Next Story