ಬೆಂಗಳೂರು: ಮನೆಗೆ ನುಗ್ಗಿ ವ್ಯಕ್ತಿಯ ಹತ್ಯೆ
ಬೆಂಗಳೂರು, ಜ. 21: ಮನೆಗೆ ನುಗ್ಗಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರದ ಪಂಚಶೀಲನಗರದಲ್ಲಿ ರವಿವಾರ ನಡೆದಿದೆ.
ಮೃತನನ್ನು ಗಣೇಶ್(50) ಎಂದು ಗುರುತಿಸಲಾಗಿದೆ. ತಮಿಳುನಾಡು ಮೂಲದ ಗಣೇಶ್ ತನ್ನ ಪತ್ನಿ ಅವರನ್ನು ಹಬ್ಬಕ್ಕೆಂದು ಊರಿಗೆ ಕಳುಹಿಸಿದ್ದರು. ನಿನ್ನೆ ರಾತ್ರಿ ಆಕೆ ಬಂದಾಗ ಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ನೋಡಿ ಆತಂಕಗೊಂಡಿದ್ದಾರೆ. ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸೆಕೆಂಡ್ ಹ್ಯಾಂಡ್ ಕಾರು, ಬೈಕ್ ಮಾರಾಟ ಮಾಡುವ ದಳ್ಳಾಳಿಯಾಗಿದ್ದ ಗಣೇಶ್ ಮದ್ಯ ವ್ಯಸನಿಯಾಗಿದ್ದರು ಎಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ 1 ಗಂಟೆ ಸುಮಾರಿನಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿರುವ ಸಾಧ್ಯತೆಯಿದೆ. ಈ ಮೊಕದ್ದಮೆ ದಾಖಲಿಸಿಕೊಂಡಿರುವ ವಿಜಯನಗರ ಠಾಣಾ ಪೊಲೀಸರು ಆರೋಪಿಗಳ ಬಂಧನಕ್ಕೆ ಶೋಧ ಕೈಗೊಂಡಿದ್ದಾರೆ.
Next Story