ಜನರನ್ನು ಪ್ರಚೋದಿಸಿ ಮತ ಗಳಿಸುವುದು ಬಿಜೆಪಿಯ ಅಜೆಂಡಾ: ಸಚಿವ ಜಯಚಂದ್ರ
ಶಾಸಕ ವಿ.ಸುನೀಲ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ
ಬೆಂಗಳೂರು, ಜ. 23: ‘ಜಾತಿ-ಧರ್ಮಗಳ ಮಧ್ಯೆ ಕಂದಕ ಸೃಷ್ಟಿಸಿ, ಜನರನ್ನು ಪ್ರಚೋದಿಸಿ, ಮತ ಗಳಿಕೆ ಮಾಡುವುದು ಬಿಜೆಪಿ ಅಜೆಂಡಾ. ಅದನ್ನು ಬಿಟ್ಟು ಅವರಿಗೆ ಬೇರೆ ಯಾವುದೇ ಕೆಲಸ ಗೊತ್ತಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅಜೆಂಡಾ ಜಾತಿ-ಧರ್ಮದ ಹೆಸರಿನಲ್ಲಿ ಒಡೆದು ಆಳುವುದು. ಆ ಮೂಲಕ ಜನರ ಭಾವನೆಗಳನ್ನು ಕೆರಳಿಸುವುದಾಗಿದೆ ಎಂದು ತಿಳಿಸಿದರು.
ಸರಕಾರದ ವಿವೇಚನೆ: ವರ್ಗಾವಣೆ ರಾಜ್ಯ ಸರಕಾರದ ವಿವೇಚನೆಗೆ ಬಿಟ್ಟದ್ದು, ಅಧಿಕಾರಿ ವರ್ಗಾವಣೆಗೂ, ಮಹಾಮಸ್ತಕಾಭಿಶೇಷಕಕ್ಕೂ ತಳಕು ಹಾಕುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಅವರು, ಕಾರ್ಯಕ್ರಮದ ಶಿಷ್ಟಾಚಾರ ಉಲ್ಲಂಘನೆ ಆಗುವುದಿಲ್ಲ ಎಂದರು.
Next Story