ಈಜುಕೊಳ ಸ್ವಚ್ಛ ಮಾಡುತ್ತಿದ್ದ ವೇಳೆ ವಿದ್ಯುತ್ ಆಘಾತ: ಕಾರ್ಮಿಕನಿಗೆ ಗಾಯ
ಬೆಂಗಳೂರು, ಫೆ.14: ಈಜುಕೊಳ ಸ್ವಚ್ಛ ಮಾಡುತ್ತಿದ್ದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಕಾರ್ಮಿಕನೋರ್ವ ಗಂಭೀರ ಗಾಯಗೊಂಡ ಘಟನೆ ಕೆ.ಆರ್.ಪುರದ ಕೊಡಿಗೆಹಳ್ಳಿಯ ಎಸ್.ಎಲ್.ವಿ.ಅಪಾರ್ಟ್ಮೆಂಟಿನಲ್ಲಿ ನಡೆದಿರುವುದು ವರದಿಯಾಗಿದೆ.
ನಾಗಮಂಗಲ ಮೂಲದ ಉಮೇಶ್ ಗಾಯಗೊಂಡವರು. ಈಜುಕೊಳವನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ಇವರಿಗೆ ಹಠಾತ್ ಆಗಿ ವಿದ್ಯುತ್ ಶಾಕ್ ಹೊಡೆದಿದೆ ಎಂದು ಹೇಳಲಾಗಿದೆ. ಇದರಿಂದ ಮೈಯೆಲ್ಲ ಸುಟ್ಟ ಗಾಯಗಳಾಗಿದ್ದು, ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story