ಬೆಂಗಳೂರು, ಫೆ. 19: ಮೇಲುಕೋಟೆ ಶಾಸಕರು ಹಾಗೂ ರಾಜ್ಯ ರೈತ ಸಂಘದ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಫೆ.18ರಂದು ನಿಧನರಾಗಿದ್ದು, ಶ್ರೀಯುತರ ನಿಧನಕ್ಕೆ ರಾಜ್ಯ ಸರಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವದೊಂದಿಗೆ ನೆರವೇರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.