ಬೆಂಗಳೂರು: ಬಿಎಂಟಿಸಿ ಬಸ್ ಢಿಕ್ಕಿ; ವ್ಯಕ್ತಿ ಮೃತ್ಯು
ಬೆಂಗಳೂರು, ಫೆ.20: ಸ್ಕೂಟರ್ನಲ್ಲಿ ಸಾಗುತ್ತಿದ್ದ ವ್ಯಕ್ತಿಗೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಲ್ಲಿನ ಹುಳಿಮಾವು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉಡುಪಿ ಮೂಲದ ಅನಂತ್(27) ಮೃತ ಸ್ಕೂಟರ್ ಸವಾರ ಎಂದು ಪೊಲೀಸರು ಗುರುತಿಸಿದ್ದಾರೆ.
ಇಲ್ಲಿನ ಜೆಸಿ ನಗರದಲ್ಲಿ ವಾಸವಾಗಿದ್ದ ಅನಂತ್, ಬನ್ನೇರುಘಟ್ಟ ರಸ್ತೆ-ಬಸವನಪುರ ಗೇಟ್ ರಸ್ತೆ ಬಳಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಪ್ರಕರಣ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಹುಳಿಮಾವು ಸಂಚಾರಿ ಠಾಣಾ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿರುವುದಾಗಿ ತಿಳಿದುಬಂದಿದೆ.
Next Story