ಬೆಂಗಳೂರು: ಬಸ್ ಢಿಕ್ಕಿ; ಪಾದಾಚಾರಿ ಮೃತ್ಯು
ಬೆಂಗಳೂರು, ಮಾ.2: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಸರಕಾರಿ ಬಸ್ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಆರ್ಟಿ ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಂಗಾನಗರದ ಕೃಷ್ಣ ಮೆನನ್(78) ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಮುಂಜಾನೆ 4:50ರ ಸುಮಾರಿಗೆ ಸಿಬಿಐ ಕಚೇರಿ ಮುಂಭಾಗ ಕೃಷ್ಣ ಮೆನನ್ ರಸ್ತೆ ದಾಟುತ್ತಿದ್ದಾಗ, ಮೆಜೆಸ್ಟಿಕ್ ಕಡೆಗೆ ಹೋಗುತ್ತಿದ್ದ ತೆಲಂಗಾಣ ಸರಕಾರಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಆರ್ಟಿ ನಗರ ಠಾಣಾ ಸಂಚಾರ ಪೊಲೀಸರು, ಬಸ್ ಚಾಲಕನನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
Next Story