ಬೆಂಗಳೂರು: ಹುಟ್ಟುಹಬ್ಬಕ್ಕೆ ಕಳುಹಿಸಲು ನಕಾರ; ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು,ಮಾ.16: ಸ್ನೇಹಿತೆಯ ಹುಟ್ಟು ಹಬ್ಬಕ್ಕೆ ಕಳುಹಿಸಲು ಪೋಷಕರು ನಿರಾಕರಿಸಿದರು ಎಂಬ ಕಾರಣದಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಪೇಗೌಡ ನಗರದಲ್ಲಿಂದು ನಡೆದಿದೆ.
ಪಿಇಎಸ್ ಕಾಲೇಜಿನಲ್ಲಿ ಓದುತ್ತಿರುವ ಕೆಂಪೇಗೌಡ ನಗರದ ಅರ್ಪಿತಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ತನ್ನ ಗೆಳತಿಯ ಹುಟ್ಟು ಹಬ್ಬದ ಆಚರಣೆಗೆ ಕಳುಹಿಸುವಂತೆ ಪೋಷಕರ ಬಳಿ ಕೇಳಿಕೊಂಡಿದ್ದಾಳೆ. ಆದರೆ, ಆಕೆಯ ಮನವಿಯನ್ನು ತಿರಸ್ಕರಿಸಿದ ಕಾರಣ ಮನನೊಂದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶುಕ್ರವಾರ ಬೆಳಗ್ಗೆ ಅರ್ಪಿತಾ ರೂಂ ಬಾಗಿಲು ತೆಗೆದ ಸಂದರ್ಭದಲ್ಲಿ ಈ ಘಟನೆ ತಿಳಿದು ಬಂದಿದೆ.
ಸ್ಥಳಕ್ಕೆ ಕೆಂಪೇಗೌಡ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.
Next Story