ಹಲ್ಲೆ ಪ್ರಕರಣ: ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ಮುಹಮ್ಮದ್ ನಲಪಾಡ್
ಬೆಂಗಳೂರು, ಮಾ.17: ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಶಾಸಕ ಎನ್.ಎ.ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್ಗೆ ಸೆಷನ್ಸ್ ಮತ್ತು ಹೈಕೋರ್ಟ್ನಿಂದ ಜಾಮೀನು ಸಿಗದ ಕಾರಣ ಸುಪ್ರೀಂಕೋರ್ಟ್ ಮೊರೆ ಹೋಗಲು ಮುಂದಾಗಿದ್ದಾರೆ.
ಹಲ್ಲೆ ಪ್ರಕರಣ ಸಂಬಂಧ ಈಗಾಗಲೇ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿರುವ ನಲಪಾಡ್ ಸಾಕ್ಷ ನಾಶಪಡಿಸುವ ಸಾಧ್ಯತೆ ಮತ್ತು ಪ್ರಭಾವಿ ಎಂಬ ಕಾರಣಕ್ಕೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಆದರೆ, ಪುತ್ರನನ್ನು ಹೊರತರಲು ಶಾಸಕ ಹಾರಿಸ್ ವಕೀಲರನ್ನು ಸಂಪರ್ಕಿಸಿ, ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ಆರೋಪಿ ಪರ ವಕೀಲರು ಸುಪ್ರೀಂಕೋರ್ಟ್ನಲ್ಲಿ ಮಧ್ಯಂತರ ಜಾಮೀನು ಅರ್ಜಿ ಅಥವಾ ಪೂರ್ಣ ಪ್ರಮಾಣದ ಜಾಮೀನು ಅರ್ಜಿ ಸಲ್ಲಿಸಿದರೆ, ಆದೇಶ ನೀಡುವ ಮೊದಲು ತಮ್ಮ ಅಭಿಪ್ರಾಯ ಆಲಿಸುವಂತೆ ಕೇವಿಯಟ್ ಸಲ್ಲಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.
Next Story