ಬೆಂಗಳೂರು: ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯ ಬಂಧನ
ಬೆಂಗಳೂರು, ಎ. 1: ಹಣವನ್ನು ಪಣಕ್ಕಿಟ್ಟುಕೊಂಡು ಅದೃಷ್ಟದ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಇಲ್ಲಿನ ಸಿಸಿಬಿ ಪೊಲೀಸರು ಏಳು ಮಂದಿಯನ್ನು ದಸ್ತಗಿರಿ ಮಾಡಿದ್ದು, ಬಂಧಿತರಿಂದ ಪಣಕ್ಕಿಟ್ಟಿದ್ದ 1.21 ಲಕ್ಷ ರೂ.ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಚಂದ್ರಶೇಖರ್ (40), ರಮೇಶ್ (32), ಸತೀಶ (65), ಸುದರ್ಶನ್ (28), ವೆಂಕಟೇಶ್ (54), ಅನಿಲ (33) ಹಾಗೂ ಧನಂಜಯ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಇಲ್ಲಿನ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಜಾಪುರ ಮುಖ್ತ ರಸ್ತೆಯಲ್ಲಿ ಹೊಟೇಲ್ನಲ್ಲಿ ಜೂಜಾಟ ಆಡುತ್ತಿದ್ದರು ಎಂದು ಗೊತ್ತಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಬೆಳ್ಳಂದೂರು ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
Next Story