ಹಿರಿಯ ನಟಿ ಜಯಂತಿ ಆಸ್ಪತ್ರೆಯಿಂದ ಬಿಡುಗಡೆ
’ಇದು ನನ್ನ ಮರು ಜನ್ಮ’
ಬೆಂಗಳೂರು, ಎ.6: ಹತ್ತು ದಿನಗಳಿಂದ ನಗರದ ಕನ್ನಿಂಗ್ಹ್ಯಾಂ ರಸ್ತೆಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಅವರು ಸಂಪೂರ್ಣ ಗುಣಮುಖರಾಗಿ ಶುಕ್ರವಾರ ಡಿಸ್ಚಾರ್ಜ್ ಆಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಆರೋಗ್ಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಟಿ ಜಯಂತಿ, ನಾನು ಬರುವಾಗ ಹೇಗಿದ್ದೆ, ಈಗಲೂ ಚೆನ್ನಾಗಿಯೇ ಇದ್ದೇನೆ. ವೈದ್ಯರು ನನಗೆ ಮರುಜನ್ಮ ಕೊಟ್ಟಿದ್ದಾರೆ. ಮಗು ತರ ನನ್ನನ್ನು ನೋಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಅಭಿಮಾನಿಗಳ ಪ್ರೀತಿಗೆ ನಾನು ಆಭಾರಿ ಎಂದು ಭಾವುಕರಾಗಿ ನುಡಿದರು.
ಇನ್ನು ಈ ಬಗ್ಗೆ ವಿವರ ನೀಡಿದ ವೈದ್ಯ ಡಾ.ಸತೀಶ್, ಉಸಿರಾಟದ ತೊಂದರೆಯಿಂದ ಅಸ್ವಸ್ಥರಾಗಿ ನಮ್ಮ ಆಸ್ಪತ್ರೆಗೆ ಜಯಂತಿ ಅವರು ದಾಖಲಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಇದೀಗ ಜಯಂತಿ ಅವರು ಆರೋಗ್ಯ ಚೇತರಿಕೆಯಾಗಿದೆ ಎಂದು ಹೇಳಿದರು.
Next Story