ಸಿಎಂ ವಿರುದ್ಧ ಬಿಜೆಪಿ ಟ್ವೀಟ್ ಅಸ್ತ್ರ ಪ್ರಯೋಗ
ಬೆಂಗಳೂರು, ಎ. 23: ‘ಒಬ್ಬ ನಾಯಕ ತಮ್ಮ ಪುತ್ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳುತ್ತಾರೆ. ಆದರೆ, ಇನ್ನೊಬ್ಬರು ಎರಡು ಕ್ಷೇತ್ರಗಳಲ್ಲಿ ಗೆಲ್ಲಲು ಕಸರತ್ತು ನಡೆಸಿದ್ದು, ಅದರಲ್ಲಿ ಒಂದು ಕ್ಷೇತ್ರದಲ್ಲಿ ತಮ್ಮ ಪುತ್ರನನ್ನು ಗೆಲ್ಲಿಸಿಕೊಂಡು ಬರುವ ಪ್ರಯತ್ನ ನಡೆಸಿದ್ದಾರೆ’ ಎಂದು ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್ ಸಿಎಂ ಸಿದ್ದರಾಮಯ್ಯರ ಕಾಲೆಳೆದಿದ್ದಾರೆ.
ಬಿಎಸ್ವೈ ಮತ್ತು ಸಿದ್ದರಾಮಯ್ಯನವರಿಗೆ ಇರುವ ವ್ಯತ್ಯಾಸ ಎಂದು ಮುರುಳೀಧರ ರಾವ್ ಟ್ವೀಟ್ ಮಾಡಿದ್ದು, ಕಾಂಗ್ರೆಸ್ನಲ್ಲಿ ತಂದೆಗೆ ಎರಡು ಕ್ಷೇತ್ರದ ಟಿಕೆಟ್, ಮಗನಿಗೆ ಒಂದು ಟಿಕೆಟ್ ಪಡೆದ ಇತಿಹಾಸವಿಲ್ಲ. ಆದರೆ, ಸಿದ್ದರಾಮಯ್ಯ ಚಾಮುಂಡೇಶ್ವರಿ, ಬಾದಾಮಿ, ಪುತ್ರ ಯತೀಂದ್ರ ವರುಣಾ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಟೀಕಿಸಿದ್ದಾರೆ.
Next Story