ಪ್ರಥಮ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
ಎಸೆಸೆಲ್ಸಿ ಫಲಿತಾಂಶ ಪ್ರಕಟ
ಬೆಂಗಳೂರು, ಮೇ 7: ಎಸೆಸ್ಸೆಲಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ಮೈಸೂರಿನ ಸದ್ವಿದ್ಯಾ ಶಾಲೆಯ ವಿದ್ಯಾರ್ಥಿ ಎಂ.ಎಸ್.ಯಶಸ್ ಹಾಗೂ ಬೆಂಗಳೂರಿನ ಬನಶಂಕರಿಯ ಹೋಲಿ ಚೈಲ್ಡ್ ಶಾಲೆಯ ವಿದ್ಯಾರ್ಥಿ ಸುದರ್ಶನ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.
ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿದ ಯಶಸ್ ಮತ್ತು ಸುದರ್ಶನ್ ಅವರಿಗೆ ದೂರವಾಣಿ ಕರೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಭಿನಂದನೆ ತಿಳಿಸಿದರು. ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಇದೇ ವೇಳೆ ಹಾರೈಸಿದ್ದಾರೆ.
Next Story