ಯಡಿಯೂರಪ್ಪರ ಮಾನಸಿಕ ಸ್ಥಿತಿ ಸರಿಯಿಲ್ಲ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ 120 ಸೀಟುಗಳನ್ನು ಗೆಲ್ಲಲಿದೆ
ಬೆಂಗಳೂರು, ಮೇ 12: ಈ ಬಾರಿಯ ವಿಧಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 120 ಸೀಟುಗಳನ್ನು ಗೆಲ್ಲಲಿದೆ. ಯಡಿಯೂರಪ್ಪ ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
“ಯಡಿಯೂರಪ್ಪ ಅವರ ಮಾನಸಿಕ ಸ್ಥಿತಿ ಸರಿಯಿಲ್ಲ. ಎಲ್ಲಾ ಸಮುದಾಯಗಳ ಬಡ ಜನರು ನಮ್ಮ ಪರವಾಗಿದ್ದಾರೆ. ಕಾಂಗ್ರೆಸ್ ಬಹುಮತ ಸಾಧಿಸಲಿದೆ. ಈ ಬಗ್ಗೆ ಯಾವುದೇ ಸಂಶಯವಿಲ್ಲ” ಎಂದು ಸಿದ್ದರಾಮಯ್ಯ ಹೇಳಿದರು.
ಬಿಜೆಪಿಯು 145ರಿಂದ 150 ಸ್ಥಾನಗಳನ್ನು ಗೆಲ್ಲಲಿದ್ದು, ರಾಜ್ಯದ ಜನತೆ ಬಿಜೆಪಿ ಜೊತೆಗಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದರು. “ಮೇ 15ರಂದು ನಾನು ಪ್ರಧಾನ ಮಂತ್ರಿಯನ್ನು ಭೇಟಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದೇನೆ” ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದರು.
Next Story