ಬಿಜೆಪಿಯಿಂದ ಸರಕಾರ ರಚನೆಗೆ ಹಕ್ಕು ಮಂಡನೆ
ಬೆಂಗಳೂರು, ಮೇ 16: ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಇಂದು ಬೆಳಗ್ಗೆ ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ ನೇತೃತ್ವದ ಪಕ್ಷದ ನಿಯೋಗವು ರಾಜ್ಯಪಾಲ ವಜುಬಾಯಿ ರುಡಬಾಯಿ ವಾಲ ಅವರನ್ನು ಭೇಟಿಯಾಗಿ 104 ಶಾಸಕರ ಸಹಿ ಇರುವ ಪತ್ರವನ್ನು ಸಲ್ಲಿಸಿದೆ. ಆ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರಕಾರ ರಚಿಸಲು ಅವಕಾಶ ಕಲ್ಪಿಸುವಂತೆ ಕೋರಿದ್ದಾರೆ.
ಇದಕ್ಕೂ ಮುನ್ನ ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು. ಬಳಿಕ ತರಾತುರಿಯಲ್ಲಿ ಬಿಜೆಪಿ ಮುಖಂಡರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.
Next Story