ನಾಳೆಯೇ ವಿಶ್ವಾಸಮತಯಾಚನೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಸ್ವಾಗತಾರ್ಹ: ನ್ಯಾ.ಸಂತೋಷ್ ಹೆಗ್ಡೆ
ಬೆಂಗಳೂರು, ಮೇ 18: ಶನಿವಾರ ವಿಶ್ವಾಸಮತಯಾಚನೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಸ್ವಾಗತಾರ್ಹವಾಗಿದ್ದು, ಇದರಿಂದ ಕುದುರೆ ವ್ಯಾಪಾರಕ್ಕೆ ಕಡಿವಾಣ ಬೀಳಲಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಗೆ ಮೊದಲು ಅವಕಾಶ ನೀಡಿದ ರಾಜ್ಯಪಾಲರ ನಿರ್ಧಾರ ಸರಿಯಾಗಿಯೇ ಇದೆ. ಆದರೆ 15 ದಿನಗಳ ಕಾಲಾವಕಾಶ ನೀಡಿದ್ದು ನನಗೆ ಸರಿ ಕಾಣಲಿಲ್ಲ. ಆದರೆ ರಾಜ್ಯಪಾಲರ ತಪ್ಪನ್ನು ಸುಪ್ರೀಂ ಕೋರ್ಟ್ ಸರಿಪಡಿಸಿದೆ ಎಂದವರು ಹೇಳಿದರು.
Next Story