ಮಾಜಿ ಪ್ರಧಾನಿ ದೇವೇಗೌಡರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬದ ಶುಭಾಶಯ ಹೇಳಿದ್ದು ಹೀಗೆ..
ಬೆಂಗಳೂರು, ಮೇ 18: ರಾಜ್ಯ ವಿಧಾನಸಭಾ ಚುನಾವಣೆಯ ಬಳಿಕ ರಾಜಕೀಯ ಮೇಲಾಟಗಳ ನಡುವೆ ಇಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ,ದೇವೇಗೌಡರು ಹುಟ್ಟುಹಬ್ಬವನ್ನಾಚರಿಸಿದರು,
ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ದೇವೇಗೌಡರಿಗೆ ಶುಭ ಹಾರೈಸಿದ್ದಾರೆ. “ಜೆಡಿ(ಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ವಿರೋಧಪಕ್ಷದ ನಾಯಕರಾಗಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿರುವ ಕೀರ್ತಿ ನಿಮ್ಮದು. ನಾಡಿನ ನೆಲ,ಜಲ,ಭಾಷೆ ಬಗೆಗಿನ ನಿಮ್ಮ ಬದ್ಧತೆ ನಮಗೆಲ್ಲರಿಗೂ ಸ್ಪೂರ್ತಿದಾಯಕ. ನೂರು ಕಾಲ ಆಯುಷ್ಯ- ಆರೋಗ್ಯ ನಿಮ್ಮದಾಗಲಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಮೈತ್ರಿ ಸರಕಾರ ರಚನೆಗೆ ಕಾಂಗ್ರೆಸ್ – ಜೆಡಿಎಸ್ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಒಂದು ಕಾಲದ ಆಪ್ತರಾಗಿದ್ದು, ನಂತರ ವೈರಿಗಳಂತಿದ್ದ ಸಿದ್ದರಾಮಯ್ಯ ಹಾಗು ದೇವೇಗೌಡ ಚುನಾವಣೋತ್ತರ ಬದಲಾವಣೆಗಳಿಂದ ಮತ್ತೊಮ್ಮೆ ಜೊತೆಯಾಗಿದ್ದಾರೆ.
ಜೆಡಿ(ಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ವಿರೋಧಪಕ್ಷದ ನಾಯಕರಾಗಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿರುವ ಕೀರ್ತಿ ನಿಮ್ಮದು. ನಾಡಿನ ನೆಲ,ಜಲ,ಭಾಷೆ ಬಗೆಗಿನ ನಿಮ್ಮ ಬದ್ಧತೆ ನಮಗೆಲ್ಲರಿಗೂ ಸ್ಪೂರ್ತಿದಾಯಕ. ನೂರು ಕಾಲ ಆಯುಷ್ಯ- ಆರೋಗ್ಯ ನಿಮ್ಮದಾಗಲಿ. pic.twitter.com/unSy5hhJH0
— Siddaramaiah (@siddaramaiah) May 18, 2018