‘ಮನೆಗೆ ಹೋಗಬೇಡಿ, ಹೊಟೇಲ್ನಲ್ಲೆ ವಾಸ್ತವ್ಯ ಹೂಡಿ’
ಬಿಜೆಪಿ ಶಾಸಕರಿಗೆ ಸಿಎಂ ಬಿಎಸ್ವೈ ಸೂಚನೆ
ಬೆಂಗಳೂರು, ಮೇ 18: ‘ರಾತ್ರಿ ಮನೆಗೆ ತೆರಳದೆ ಹೊಟೇಲ್ನಲ್ಲೆ ವಾಸ್ತವ್ಯವಿದ್ದು, ಇಲ್ಲಿಂದಲೇ ವಿಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ನೇರವಾಗಿ ವಿಧಾನಸೌಧಕ್ಕೆ ಆಗಮಿಸಬೇಕು’ ಎಂದು ಬಿಜೆಪಿ 104 ಮಂದಿ ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.
ಶುಕ್ರವಾರ ರಾತ್ರಿ ಇಲ್ಲಿನ ಖಾಸಗಿ ಹೊಟೇಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಶಾಸಕರನ್ನು ಉದ್ದೇಶಿಸಿ ಮಾತನಾಡಿದರು. ‘ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು, ಬಿಜೆಪಿ ಶಾಸಕರನ್ನು ಸಂಪರ್ಕಿಸಿರುವ ಭೀತಿ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದೆ ಎಂದು ಹೇಳಲಾಗಿದೆ.
ವಿಶ್ವಾಸ ಮತಯಾಚನೆ ಮೂಲಕ ಬಹುಮತ ಸಾಬೀತು ಮಾಡಲು ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಬಿಜೆಪಿಯ ಎಲ್ಲ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಂಡ ಬಿಜೆಪಿ ಮುಖಂಡರು ಖಾಸಗಿ ಹೊಟೇಲ್ನಲ್ಲಿ ತುರ್ತುಸಭೆ ನಡೆಸಿ, ಸುದೀರ್ಘ ಸಮಾಲೋಚನೆ ನಡೆಸಿದರು.
Next Story