ಬಿಎಸ್ವೈರಿಂದ ಮಹಾಂತ ಶ್ರೀಗಳಿಗೆ ಅಂತಿಮ ನಮನ
ಬಾಗಲಕೋಟೆ, ಮೇ 21: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಲಿಂಗೈಕ್ಯ ಮಹಾಂತಶ್ರೀಗಳ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಮಾಜಿ ಸಿಎಂಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸೋಮವಾರ ಜಿಲ್ಲೆಯ ಇಳಕಲ್ ನಗರಕ್ಕೆ ಭೇಟಿ ನೀಡಿ ಲಿಂಗೈಕ್ಯ ಮಹಾಂತ ಶ್ರೀಗಳ ಪಾರ್ಥಿವ ಶರೀಕ್ಕೆ ಅಂತಿಮ ನಮನ ಸಲ್ಲಿಸಿದರು.
ಬಳಿಕ ಸರಕಾರಿ ಗೌರವದೊಂದಿಗೆ ಮಹಾಂತ ಶ್ರೀಗಳ ಅಂತ್ಯಕ್ರಿಯೆ ನೆರವೇರಿತು. ಬಿಎಸ್ವೈ ಸಮ್ಮುಖದಲ್ಲಿ ಜಿಲ್ಲಾಡಳಿತದಿಂದ ಸರಕಾರಿ ಗೌರವ ನೀಡಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ಪೂಜ್ಯರಿಗೆ ಗೌರವ ಸಲ್ಲಿಸಲಾಯಿತು.
Next Story