ವಿಶ್ವಾಸಮತ ಯಾಚನೆ ಹಿನ್ನೆಲೆ: ಮಾ 25 ರಂದು ವಿಧಾನಸೌಧ ಸುತ್ತ ನಿಷೇಧಾಜ್ಞೆ
ಬೆಂಗಳೂರು, ಮೇ 24: ಎಚ್.ಡಿ.ಕುಮಾರಸ್ವಾಮಿಯ ಮಾ 25 ರಂದು ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ 2 ಕಿ.ಮೀವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ಆದೇಶ ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ 144ನೇ ಅನ್ವಯ ಶುಕ್ರವಾರ ಬೆಳಗ್ಗೆ 6ಗಂಟೆಯಿಂದ ಮಧ್ಯರಾತ್ರಿ 12ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿದ್ದು, ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ, ಸಭೆ ನಡೆಸಲು ನಿಷೇಧಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story