ಬೆಂಗಳೂರು: ಬೈಕ್ಗೆ ಲಾರಿ ಢಿಕ್ಕಿ; ಮಹಿಳೆ ಮೃತ್ಯು
ಬೆಂಗಳೂರು, ಜೂ.7: ಹಿಂದಿನಿಂದ ವೇಗವಾಗಿ ಬಂದ ಲಾರಿ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಮೃತಪಟ್ಟಿರುವ ದುರ್ಘಟನೆ ನಗರದ ಹೊರವಲಯದ ಅರಿಶಿನಕುಂಟೆ ಬಳಿ ನಡೆದಿದೆ.
ತ್ಯಾಮಗೊಂಡ್ಲುವಿನ ಆಶಾ(24) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ಪತಿ ಮಂಜುನಾಥ್ಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಗರದಿಂದ ತ್ಯಾಮಗೊಂಡ್ಲುವಿಗೆ ಮಂಜುನಾಥ್, ಆಶಾ ಹಾಗೂ ಇಬ್ಬರು ಮಕ್ಕಳನ್ನು ಕರೆದುಕೊಂಡು ಗುರುವಾರ ಬೆಳಗ್ಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಸ್ತೆಯ ಬಲಭಾಗಕ್ಕೆ ಬಿದ್ದು ಆಶಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಡಭಾಗಕ್ಕೆ ಬಿದ್ದ ಮಂಜುನಾಥ್ ಮಕ್ಕಳು ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಅಪಘಾತ ನಡೆಯುತ್ತಿದ್ದಂತೆ ಲಾರಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
Next Story