ಪರಿಷತ್ ಸದಸ್ಯರಾಗಿ ಭೋಜೇಗೌಡ, ನಾರಾಯಣಸ್ವಾಮಿ, ಆಯನೂರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, ಜೂ. 25: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ವಿಧಾನ ಪರಿಷತ್ತಿನ ನೂತನ ಸದಸ್ಯರಾದ ಎಸ್.ಎಲ್.ಭೋಜೇಗೌಡ, ವೈ.ಎ. ನಾರಾಯಣಸ್ವಾಮಿ ಹಾಗೂ ಆಯನೂರು ಮಂಜುನಾಥ್ ಅವರು ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸೋಮವಾರ ವಿಧಾನಸೌಧದ ಮೊದಲ ಮಹಡಿಯಲ್ಲಿನ ಸಮಿತಿ ಕೊಠಡಿಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ನೂತನ ಸದಸ್ಯರಿಗೆ, ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅಧಿಕಾರ ಮತ್ತು ಗೌಪತ್ಯೆಯ ಪ್ರಮಾಣ ವಚನವನ್ನು ಬೋಧಿಸಿದರು.
ಎಸ್.ಎಲ್.ಭೋಜೇಗೌಡ ದೇವರ ಹೆಸರಿನಲ್ಲಿ, ವೈ.ಎ.ನಾರಾಯಣಸ್ವಾಮಿ ಶಿಕ್ಷಕರ ಹೆಸರಿನಲ್ಲಿ ಹಾಗೂ ಆಯನೂರು ಮಂಜುನಾಥ್ ಬಸವಣ್ಣನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story