ಒಟ್ಟಿಗೆ ಕೂತು ಔತಣ ಸವಿದ ಬಿಎಸ್ವೈ, ಎಚ್ಡಿಕೆ, ಸಿದ್ದರಾಮಯ್ಯ
ಬೆಂಗಳೂರು, ಜು. 12: ಹಾವು-ಮುಂಗುಸಿಯಂತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಒಟ್ಟಿಗೆ ಕೂತು ಭೋಜನ ಸವಿದರು.
ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಅಧಿವೇಶನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಶಾಸಕರು, ಮೇಲ್ಮನೆ ಸದಸ್ಯರಿಗೆ ಔತಣಕೂಟ ಏರ್ಪಡಿಸಿದ್ದರು. ಔತಣಕ್ಕೆ ಬಂದ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಎದ್ದು ನಿಂತು ಸ್ವಾಗತಿಸಿದರು.
ಅಲ್ಲದೆ, ಬಿಎಸ್ವೈ ಕೈ ಹಿಡಿದು ಕರೆತಂದು ತಾವು ಕುಳಿತುಕೊಂಡಿದ್ದ ಕುರ್ಚಿ ಬಿಟ್ಟುಕೊಟ್ಟರು. ಸಿದ್ದರಾಮಯ್ಯ ಅವರು ಅಕ್ಕ-ಪಕ್ಕ ಕೂತು ಊಟ ಮಾಡಿದರು. ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಸಚಿವ ಆರ್.ವಿ.ದೇಶಪಾಂಡೆ, ಪರಿಷತ್ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿಯವರು ಈ ವೇಳೆ ಇದ್ದರು.
Next Story