ಕಾರು ಚಾಲಕನ ಮೇಲೆ ಹಲ್ಲೆ: ಆರೋಪ
ಬೆಂಗಳೂರು, ಆ.1: ಕಾರು ಚಾಲಕನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯಲ್ಲಿ ಕಾರು ಚಾಲಕ ನಾಗರಾಜ್ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 8.45ರ ಸುಮಾರಿಗೆ ನಗರದ ಹೆಣ್ಣೂರು-ಬಾಗಲೂರು ರಸ್ತೆಯ ಅಪಾರ್ಟ್ಮೆಂಟ್ ಬಳಿ ಕ್ಷುಲ್ಲಕ ವಿಚಾರವಾಗಿ ಜಗಳವಾಗಿ ನಾಗರಾಜ್ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಕೊತ್ತನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story