ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ: ಓರ್ವನಿಗೆ ಗಾಯ
ಬೆಂಗಳೂರು, ಆ.8: ಮೊಬೈಲ್ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ನೇಹಿತರ ನಡುವೆ ಜಗಳ ಉಂಟಾಗಿ ಒಬ್ಬನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ರಾಜೇಶ್(28) ಎಂಬಾತ ಹಲ್ಲೆಯಿಂದ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಲ್ಲೆ ನಡೆಸಿದ ಆರೋಪಿ ಲಕ್ಷ್ಮೀಪುತ್ರ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜೇಶ್ ಮತ್ತು ಲಕ್ಷ್ಮೀಪುತ್ರ ಇಲ್ಲಿನ ಹೂಡಿಯ ಮುಖ್ಯರಸ್ತೆಯ ಮನೆಯೊಂದರಲ್ಲಿ ವಾಸವಾಗಿದ್ದರು. ಆದರೆ, ಮೊಬೈಲ್ ವಿಚಾರವಾಗಿ ಇವರ ನಡುವೆ ಜಗಳ ಉಂಟಾಗಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಮಹದೇವಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story