ಪೊಲೀಸ್ ಪೇದೆ(ನಾಗರಿಕ) ಹುದ್ದೆಗಳ ನೇಮಕಾತಿ ಪರೀಕ್ಷೆ ರದ್ದು
ಬೆಂಗಳೂರು, ಆ.16: ರಾಜ್ಯದ ಹಲವು ಕಡೆ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ, ರವಿವಾರ (ಆ.19) ನಡೆಯಬೇಕಿದ್ದ ಪೊಲೀಸ್ ಪೇದೆ(ನಾಗರಿಕ) ಹುದ್ದೆಗಳ ನೇಮಕಾತಿ ಪರೀಕ್ಷೆ ರದ್ದುಗೊಂಡಿದೆ.
ರಾಜ್ಯ ಕಮೀಷನರೇಟ್ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ಆ.19 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿರುವ ಹಿನ್ನಲೆ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಕೇಂದ್ರಗಳಿಗೆ ಹಾಜರಾಗಲು ಅನಾನುಕೂಲವಾಗುವ ಸಾಧ್ಯತೆ ಇರುವುದರಿಂದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಮುಂದಿನ ಲಿಖಿತ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಯ ಪಡಿಸಲಾಗುವುದು ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.
Next Story