ಬೆಂಗಳೂರು: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ
ಬೆಂಗಳೂರು, ಆ.16: ಹಿಂದಿನಿಂದ ಅತಿವೇಗವಾಗಿ ಮುನ್ನುಗ್ಗಿದ ಬೈಕ್ವೊಂದು ಸೈಕಲ್ಗೆ ಢಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಹೊರವಲಯದ ಮಣ್ಣಿಗೆರೆ ನಿವಾಸಿ ಶರಣ್ ರಾಜ್(25) ಮೃತಪಟ್ಟ ಬೈಕ್ ಸವಾರ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಸೊಣ್ಣೆ ಗೇಟ್ ಬಳಿ ಬುಧವಾರ ರಾತ್ರಿ 8:15ರ ಸುಮಾರಿಗೆ ಶರಣ್ರಾಜ್ ಬೈಕ್ನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಸೈಕಲ್ಗೆ ಢಿಕ್ಕಿ ಹೊಡೆದು ಶರಣ್ ರಾಜ್ ಗಂಭೀರ ಗಾಯಗೊಂಡರು. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಸೈಕಲ್ ಸವಾರ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ದೇವನಹಳ್ಳಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story