ಗೂಂಡಾ ಕಾಯ್ದೆಯಡಿ ಮಾಗಡಿ ರೋಡ್ ಕೃಷ್ಣ ಸೆರೆ
ಬೆಂಗಳೂರು, ಆ.28: ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದಡಿ ರೌಡಿ ಶೀಟರ್ ಕೃಷ್ಣ ಯಾನೆ ಮಾಗಡಿ ರೋಡ್ ಕೃಷ್ಣ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಇಲ್ಲಿನ ಕೆಪಿ ಅಗ್ರಹಾರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕೃಷ್ಣ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ, ದರೋಡೆ ಆರೋಪದಡಿ ನಗರದ ಜ್ಞಾನಭಾರತಿ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 12 ಪ್ರಕರಣಗಳು ದಾಖಲಾಗಿತ್ತು. ಜೊತೆಗೆ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
ಸಾರ್ವಜನಿಕರ ಸುವ್ಯವಸ್ಥೆಗೆ ಭಂಗ ತರುವ ಚಟುವಟಿಕೆಗಳಿಂದ ತಡೆಗಟ್ಟಬೇಕಾದರೆ ಗೂಂಡಾ ಕಾಯ್ದೆಯಡಿ ಬಂಧನದಲ್ಲಿಡಲು ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ಅವರ ಮಾರ್ಗದರ್ಶನದಲ್ಲಿ ಆರೋಪಿ ವಿರುದ್ಧ ವರದಿ ತಯಾರಿಸಿ ಮಂಡಿಸಿದ ಮೇರೆಗೆ ಗೂಂಡಾಕಾಯ್ದೆಯಡಿ ಬಂಧನದಲ್ಲಿಡಲು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದರು.
Next Story