ಸನಾತನ ಸಂಘಟನೆಯನ್ನು ಭಯೋತ್ಪಾದನಾ ಸಂಘಟನೆ ಎಂದು ಘೋಷಿಸಲು ಒತ್ತಾಯ
ದೊರೆಸ್ವಾಮಿ ನೇತೃತ್ವದಲ್ಲಿ ಉಪಮುಖ್ಯಮಂತ್ರಿಯನ್ನು ಭೇಟಿಯಾದ ಗೌರಿ ಲಂಕೇಶ್ ಟ್ರಸ್ಟ್ ಸದಸ್ಯರು
ಬೆಂಗಳೂರು, ಆ. 31: ಸನಾತನ ಸಂಘಟನೆಯನ್ನು ಭಯೋತ್ಪಾದನಾ ಸಂಘಟನೆ ಎಂದು ಘೋಷಿಸುವುದು ಹಾಗೂ ಜಿಗ್ನೇಶ್ ಮೇವಾನಿ, ಪ್ರಕಾಶ್ ರೈ ವಿರುದ್ಧ ದಾಖಲಾಗಿರುವ ಪ್ರಕರಣ ಹಿಂಪಡೆಯುವಂತೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನೇತೃತ್ವದ ಗೌರಿ ಲಂಕೇಶ್ ಟ್ರಸ್ಟ್ ಸದಸ್ಯರು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು ಹಾಗು ಇತರರು ಇದ್ದರು.
Next Story