ಐಟಿ ಅಧಿಕಾರಿಗಳಿಗೆ ಪತ್ರ ಬರೆದಿಲ್ಲ: ಬಿಎಸ್ವೈ
ಬೆಂಗಳೂರು, ಸೆ.8: ಆದಾಯ ತೆರಿಗೆ ಇಲಾಖೆಗೆ ನಾನು ಯಾವುದೆ ಪತ್ರವನ್ನು ಬರೆದಿಲ್ಲ. ಸಂಸದ ಡಿ.ಕೆ.ಸುರೇಶ್ ಬಿಡುಗಡೆ ಮಾಡಿರುವ ಪತ್ರ ನಕಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಸಂಬಂಧ ಮೊದಲಿನಿಂದಲೂ ಚೆನ್ನಾಗಿದೆ. ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು, ನಾನು ಬಿಜೆಪಿಯಲ್ಲಿದ್ದೇನೆ. ಪಕ್ಷಗಳು ಬೇರೆಯಾದರೂ ನಮ್ಮ ಸಂಬಂಧ ಅನ್ಯೋನ್ಯವಾಗಿದೆ ಎಂದರು.
ನಾನೇಕೆ ಶಿವಕುಮಾರ್ ವಿರುದ್ಧ ದೂರು ನೀಡಲಿ. ಡಿ.ಕೆ.ಸುರೇಶ್ ಈ ರೀತಿಯ ಆರೋಪ ಮಾಡುವ ಮೂಲಕ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ನನ್ನ ಹಾಗೂ ಶಿವಕುಮಾರ್ ಸಂಬಂಧದ ಬಗ್ಗೆ ಅವರು ತಮ್ಮ ಅಣ್ಣನ ಬಳಿಯೇ ಕೇಳಿ ತಿಳಿದುಕೊಳ್ಳಲಿ ಎಂದು ಯಡಿಯೂರಪ್ಪ ಹೇಳಿದರು.
Next Story