ಬೆಂಗಳೂರು: ಬೈಕ್ಗೆ ಟಿಪ್ಪರ್ ಢಿಕ್ಕಿ; ವ್ಯಕ್ತಿ ಮೃತ್ಯು
ಬೆಂಗಳೂರು, ಸೆ.11: ಬೈಕ್ಗೆ ಹಿಂದಿನಿಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ನಗರದ ಲಗ್ಗೆರೆ ನಿವಾಸಿ, ಗಾರ್ಮೆಂಟ್ಸ್ ಮ್ಯಾನೇಜರ್ ಕೃಷ್ಣಯ್ಯ(43) ಎಂಬುವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಬೈಕ್ನಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಬನ್ನೇರುಘಟ್ಟ ರಸ್ತೆಯ ಕೋಳಿ ಫಾರಂ ಗೇಟ್ ಮತ್ತು ನೈಸ್ ರೋಡ್ ಮಧ್ಯೆ ಇರುವ ಬಸವನಪುರ ಗೇಟ್ ಬಳಿ ಹಿಂದಿನಿಂದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಹುಳಿಮಾವು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.
Next Story