ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಪಕ್ಷೇತರರು ಕಾಂಗ್ರೆಸ್ ಬೆಂಬಲಿಸಬೇಕು: ದಿನೇಶ್ ಗುಂಡೂರಾವ್ ಮನವಿ
ಬೆಂಗಳೂರು, ಸೆ.11: ಬಿಬಿಎಂಪಿ ಮೇಯರ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪಕ್ಷೇತರ ಸದಸ್ಯರು ಮತ್ತೊಮ್ಮೆ ಕಾಂಗ್ರೆಸನ್ನು ಬೆಂಬಲಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.
ಶಾಸಕ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಗರದ ಖಾಸಗಿ ಹೊಟೇಲ್ನಲ್ಲಿ ಬಿಬಿಎಂಪಿ ಪಕ್ಷೇತರ ಅಭ್ಯರ್ಥಿಗಳೊಂದಿಗೆ ನಡೆದ ಸಭೆಯಲ್ಲಿ, ಪಕ್ಷೇತರ ಸದಸ್ಯರು ಪ್ರತಿಬಾರಿಯು ಕಾಂಗ್ರೆಸ್ಸನ್ನು ಬೆಂಬಲಿಸಿದ್ದಾರೆ. ಹೀಗಾಗಿ ಈ ಬಾರಿಯು ಬೆಂಬಲ ಕೊಡಬೇಕೆಂದು ತಿಳಿಸಿದ್ದಾರೆ.
ಈ ವೇಳೆ ಪಕ್ಷೇತರ ಅಭ್ಯರ್ಥಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನಗರದ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಸೂಚನೆಯಂತೆ ನಡೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೆ ಅನುಮಾನ ಬೇಡವೆಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
Next Story