ಕ್ರೇನ್ ಢಿಕ್ಕಿ; ಪಾದಚಾರಿಗೆ ಗಂಭೀರ ಗಾಯ
ಬೆಂಗಳೂರು/ಚಿಕ್ಕಬಳ್ಳಾಪುರ, ಸೆ.13: ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಕ್ರೇನ್ ಹರಿದ ಪರಿಣಾಮ ಕಾಲಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ನಡೆದಿದೆ.
ಇಲ್ಲಿನ ಬಿಬಿ ರಸ್ತೆಯ ಬಾಲಾಜಿ ಚಿತ್ರಮಂದಿರದ ಬಳಿ ಘಟನೆ ನಡೆದಿದ್ದು, ಹೊನ್ನಗಿರಿಯಪ್ಪನಹಳ್ಳಿಯ 60 ವರ್ಷದ ವೃದ್ಧನ ಕಾಲಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ನಂತರ ಕ್ರೇನ್ ವಾಹನ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿರುವುದಾಗಿ ತಿಳಿದುಬಂದಿದ್ದು, ಕಾಲು ಕಳೆದುಕೊಳ್ಳುವಂತಾಗಿದೆ. ಗಂಭೀರವಾಗಿ ಗಾಯಗೊಂಡಿರುವ ವೃದ್ಧನನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story