ನೇಣು ಬಿಗಿದು ಬಾಲಕಿ ಆತ್ಮಹತ್ಯೆ
ಬೆಂಗಳೂರು, ಸೆ.14: ನಿರ್ಮಾಣ ಹಂತದ ಕಟ್ಟಡದಲ್ಲಿ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಗರದ ಕೆ.ಪಿ. ಅಗ್ರಹಾರ ಠಾಣಾ ವ್ಯಾಪ್ತಿಯ ನಡೆದಿದೆ.
ಭುವನೇಶ್ವರಿ ನಗರದ 16 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದು, ಈಕೆ ಹತ್ತನೆ ತರಗತಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ವಾಸವಿದ್ದ ಮನೆಯ ಪಕ್ಕದಲ್ಲೇ ಇದ್ದ ನಿರ್ಮಾಣ ಹಂತದ ಕಟ್ಟಡಕ್ಕೆ ಹೋಗಿ ನೇಣು ಬಿಗಿದುಕೊಂಡಿದ್ದಾಳೆ. ಬಳಿಕ ಬಾಲಕಿಯ ತಂದೆ ಕಟ್ಟಡ ಬಳಿ ಹೋದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆಸ್ಪತ್ರೆ ಸೇರಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಲಾಗುತ್ತಿದೆ.
ಬಾಲಕಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story