ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಮಹಿಳೆಯರ ಸೆರೆ
ಬೆಂಗಳೂರು, ಸೆ.14: ಸಾರ್ವಜನಿಕರನ್ನು ಬಲವಂತವಾಗಿ ಆಟೊದಲ್ಲಿ ಕರೆದುಕೊಂಡು ಹೋಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಇಬ್ಬರು ಮಹಿಳೆಯನ್ನು ಇಲ್ಲಿನ ಉಪ್ಪಾರಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿಗಳಾದ ಆಶಾ(28) ಮತ್ತು ರೇಖಾ(28) ಎಂಬುವರು ಬಂಧಿತ ಮಹಿಳೆಯರು ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.11ರಂದು ತಡರಾತ್ರಿ ಸಂತೋಷ್ ಕುಮಾರ್ ಶೆಟ್ಟಿ ಎಂಬುವರನ್ನು 5-6 ಜನ ಮಹಿಳೆಯರು ಕೆಂಪೇಗೌಡ ಬಸ್ನಿಲ್ದಾಣದ ಬಳಿ ಆಟೊದಲ್ಲಿ ಕೂರಿಸಿಕೊಂಡು ಹಣ ನೀಡುವಂತೆ ಬೆದರಿಸಿದ್ದಾರೆ ಎನ್ನಲಾಗಿದೆ.
ಈ ವಿಷಯದ ಕುರಿತು ಸಂತೋಷ್ ಕುಮಾರ್ ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದು, ಮತ್ತಿಬ್ಬರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
Next Story