ಸದಾಶಿವ ಬ್ರಹ್ಮಾವರ ನಿಧನಕ್ಕೆ ಕುಮಾರಸ್ವಾಮಿ ಸಂತಾಪ
ಬೆಂಗಳೂರು, ಸೆ.20: ಹಿರಿಯ ನಟ, ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಸದಾಶಿವ ಬ್ರಹ್ಮಾವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಿತ್ರರಂಗದಲ್ಲಿ ಅವರು ಸಜ್ಜನ ನಟ ಎಂದೇ ಹೆಸರಾಗಿದ್ದರು. ಅವರ ಪಾತ್ರಗಳು ಮನುಷ್ಯ ಸಂಬಂಧಗಳ ಪ್ರತಿಪಾದನೆಯ ಪ್ರತೀಕದಂತಿದ್ದವು ಎಂದು ಸ್ಮರಿಸಿದ ಮುಖ್ಯಮಂತ್ರಿ, ಸದಾಶಿವ ಅವರ ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
Next Story