ಸೀಮೆಎಣ್ಣೆ ಸುರಿದು ಮಹಿಳೆ ಆತ್ಮಹತ್ಯೆ
ಬೆಂಗಳೂರು, ಸೆ.21: ಊಟದ ವಿಚಾರವಾಗಿ ದಂಪತಿ ನಡುವೆ ಉಂಟಾದ ವಿಚಾರಕ್ಕೆ ನೊಂದು ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಶಾಂಪುರದ ನಿವಾಸಿ ನಾಗರಾಜ ಎಂಬವರ ಪತ್ನಿ ಜಯಲಕ್ಷ್ಮೀ(31) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಂಟು ವರ್ಷಗಳ ಹಿಂದೆ ಜಯಲಕ್ಷ್ಮೀ ಅವರು ನಾಗರಾಜನನ್ನು ವಿವಾಹವಾಗಿದ್ದರು. ಊಟದ ವಿಚಾರವಾಗಿ ದಂಪತಿ ನಡುವೆ ಜಗಳವಾಗಿದೆ. ಇದರಿಂದ ನೊಂದು ಆಕೆ ಗುರುವಾರ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಯಲ್ಲಿಡಲಾಗಿದ್ದು, ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story