ರಿಯಲ್ ಎಸ್ಟೇಟ್ ಉದ್ಯಮಿ ಅನುಮಾನಾಸ್ಪದ ಸಾವು
ಬೆಂಗಳೂರು, ಸೆ.25: ರಿಯಲ್ ಎಸ್ಟೇಟ್ ಉದ್ಯಮಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ ಎಂಬ ಆರೋಪ ಇಲ್ಲಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.
ಶ್ರೀನಿವಾಸ್(50) ಎಂಬಾತ ಮೃತ ಪಟ್ಟ ರಿಯಲ್ ಎಸ್ಟೇಟ್ ಉದ್ಯಮಿ ಎನ್ನಲಾಗಿದ್ದು, ನಗರದ ಕತ್ರಿಗುಪ್ಪೆಯ ವಾಟರ್ ಟ್ಯಾಂಕ್ ಬಳಿಯಲ್ಲಿದ್ದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.
ಆರೋಪ: ಮೃತ ಶ್ರೀನಿವಾಸ್, ರಾಘವೇಂದ್ರ ಎಂಬಾತನಿಗೆ ಕೆಲ ದಿನಗಳ ಹಿಂದೆ ಹಣ ಕೊಟ್ಟಿದ್ದರು ಎನ್ನಲಾಗಿದ್ದು, ವಾಪಸ್ಸು ಪಡೆಯುವ ಸಂಬಂಧ ರಾಘವೇಂದ್ರ ಅವರ ಕಚೇರಿಗೆ ಹೋಗಿದ್ದರು. ಅವರ ಕಚೇರಿಯಲ್ಲೇ ಶ್ರೀನಿವಾಸ ಮೃತದೇಹ ಪತ್ತೆಯಾಗಿದೆ. ಹೀಗಾಗಿ, ರಾಘವೇಂದ್ರ ಅವರೇ ಶ್ರೀನಿವಾಸ್ ಅವರನ್ನು ಕೊಲೆಗೈದಿರಬಹುದು ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ.
Next Story