ವಿಧಾನಸೌಧ ಕಾರಿಡಾರ್ನಲ್ಲಿ ಕುಸಿದುಬಿದ್ದ ರೈತ
ಬೆಂಗಳೂರು, ಸೆ.28: ಸಾಲಮನ್ನಾ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮನವಿ ಸಲ್ಲಿಸಲು ಆಗಮಿಸಿದ್ದ ಮಂಡ್ಯ ಜಿಲ್ಲೆಯ ರೈತ ಅರುಣ್ ಎಂಬವರು ವಿಧಾನಸೌಧ ಕಾರಿಡಾರ್ನಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದ ಘಟನೆ ಶುಕ್ರವಾರ ನಡೆಯಿತು.
ಜನತಾ ದರ್ಶನ ನಡೆಸಿದ ವೇಳೆಯೂ ಅರುಣ್ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತಮ್ಮ ಸಾಲ ಮನ್ನಾ ಮಾಡುವಂತೆ ಜನತಾದರ್ಶನದಲ್ಲಿ ಮುಖ್ಯಮಂತ್ರಿಗೆ ಅರುಣ್ ಅರ್ಜಿ ಸಲ್ಲಿಸಿದ್ದರು. ಆದರೆ, ಈವರೆಗೆ ತಮ್ಮ ಸಾಲ ಮನ್ನಾ ಆಗಿಲ್ಲ ಎಂದು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮತ್ತೊಮ್ಮೆ ಮನವಿ ಸಲ್ಲಿಸಲು ವಿಧಾನಸೌಧಕ್ಕೆ ಆಗಮಿಸಿದ್ದರು.
ಏಕಾಏಕಿ ಕುಸಿದು ಬಿದ್ದ ಪರಿಣಾಮವಾಗಿ ಅರುಣ್ ಅವರ ತಲೆ ಹಾಗೂ ಮುಖಕ್ಕೆ ಸಣ್ಣ ಪೆಟ್ಟಾಗಿದ್ದು, ಕೂಡಲೆ ಸ್ಥಳದಲ್ಲಿ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಗೃಹ ರಕ್ಷಕ ದಳದ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ನೆರವಾದರು.
Next Story