ಸಿದ್ದರಾಮಯ್ಯರನ್ನು ಭೇಟಿಯಾದ ಬಿಬಿಎಂಪಿ ಮೇಯರ್, ಉಪ ಮೇಯರ್
ಬೆಂಗಳೂರು, ಸೆ.29: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಹಾಗೂ ಉಪ ಮೇಯರ್ ರಮೀಳಾ ಉಮಾಶಂಕರ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅವರ ನಿವಾಸ ಕಾವೇರಿಯಲ್ಲಿಂದು ಭೇಟಿಯಾಗಿ ಮಾತುಕತೆ ನಡೆಸಿದರು.
ಇದೇ ಸಂದರ್ಭ ಮೇಯರ್-ಉಪ ಮೇಯರ್ರನ್ನು ಅಭಿನಂದಿಸಿದ ಸಿದ್ದರಾಮಯ್ಯ ಶುಭ ಹಾರೈಸಿದರು.
ಈ ಸಂದರ್ಭ ಶಾಸಕ ಸೋಮಶೇಖರ್, ಮುರತ್ನ, ಬೈರತಿ ಬಸವರಾಜ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್ ಉಪಸ್ಥಿತರಿದ್ದರು.
Next Story