ನಿವೃತ್ತ ಅಧಿಕಾರಿ ಡಾ.ಸಿದ್ದರಾಮಯ್ಯ ಬಿಜೆಪಿ ಸೇರ್ಪಡೆ
ಬೆಂಗಳೂರು, ಅ.11: ಮಾಜಿ ಶಾಸಕ ದೊಡ್ಡ ಬೋರೇಗೌಡರ ಪುತ್ರ ನಿವೃತ್ತ ಅಧಿಕಾರಿ ಡಾ.ಸಿದ್ದರಾಮಯ್ಯ ಬಿಜೆಪಿಗೆ ಸೇರ್ಪಡೆಯಾದರು.
ಗುರುವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಬೆಂಬಲಿಗರೊಂದಿಗೆ ಆಗಮಿಸಿದ ಅವರು, ಮಾಜಿ ಡಿಸಿಎಂ ಆರ್ಅಶೋಕ್, ಸಿ.ಪಿ ಯೋಗೀಶ್ವರ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಈಗಾಗಲೇ ಸಿದ್ದರಾಮಯ್ಯರನ್ನು ಮಂಡ್ಯ ಲೋಕಸಭೆ ಅಭ್ಯರ್ಥಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ.
ನಿವತ್ತ ಹೆಚ್ಚುವರಿ ವಾಣಿಜ್ಯ ತೆರೆಗೆ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ.ಸಿದ್ದರಾಮಯ್ಯ, ಇತ್ತೀಚೆಗೆ ಕೆಲವು ವರ್ಷಗಳಿಂದ ಸಮಾಜ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಲಾಗಿದೆ.
Next Story