ಬೆಂಗಳೂರು: ಮುದ್ರಣಾಯಲದಲ್ಲಿ ಅಗ್ನಿ ಅವಘಡ
ಬೆಂಗಳೂರು, ಅ.13: ಮುದ್ರಣಾಯಲಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರೀ ನಷ್ಟ ಉಂಟಾಗಿರುವ ಘಟನೆ ಇಲ್ಲಿನ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವೈಷ್ಣವಿ ಲೇಔಟ್ನ ಎರಡನೆ ಮುಖ್ಯ ರಸ್ತೆ 2ನೆ ಕ್ರಾಸ್ನಲ್ಲಿ ಮುದ್ರಣಾಯಲಯ ಇದ್ದು ಶುಕ್ರವಾರ ರಾತ್ರಿ 8:15ರ ಸುಮಾರಿಗೆ ಇಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದ ತಕ್ಷಣ ಅಗ್ನಿ ಶಾಮಕ ಸಿಬ್ಬಂದಿಗಳು 5 ವಾಹನಗಳೊಂದಿಗೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story