ಕರವೇ ನಾರಾಯಣ ಗೌಡ ವಿರುದ್ಧ ಮೊಕದ್ದಮೆ ದಾಖಲು
ಬೆಂಗಳೂರು, ಅ.14: ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ವಿರುದ್ಧ ಕೊಲೆ ಯತ್ನ ಆರೋಪದಡಿ ಇಲ್ಲಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ ಎನ್ನಲಾಗಿದೆ.
ಕರವೇ ಪ್ರವೀಣ್ ಶೆಟ್ಟಿ ಬಳಗದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಧ್ಯಕ್ಷರಾಗಿರುವ ನಾಗರಾಜ್ ಎಂಬಾತನ ಮೇಲೆ ಶನಿವಾರ ರಾತ್ರಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ, ನಾರಾಯಣಗೌಡ ಮತ್ತು ಸಹೋದರ ಧರ್ಮರಾಜ್ ಸೇರಿ 12 ಮಂದಿ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ.
ನಾರಾಯಣಗೌಡ ಮತ್ತು ಆತನ ಸಹೋದರರು ನನ್ನ ಕೊಲೆ ಮಾಡಲು ಸಂಚು ರೂಪಿಸಿ, ಹಲ್ಲೆ ಮಾಡಿದ್ದಾರೆಂದು ನಾಗರಾಜ್ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Next Story