ಹೆಬ್ಬಾಳ ಕೆರೆಗೆ ಸಿಎಂ ಕುಮಾರಸ್ವಾಮಿ ಭೇಟಿ: ಪರಿಶೀಲನೆ
ಬೆಂಗಳೂರು, ಅ.18: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಗುರುವಾರ ಮೈಸೂರಿನ ಹೆಬ್ಬಾಳ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕೆರೆಯನ್ನು ಇನ್ಫೋಸಿಸ್ ಪ್ರತಿಷ್ಠಾನ 50 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಶಂಕರ್, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ, ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಮತ್ತಿತರರು ಹಾಜರಿದ್ದರು.
Next Story